Local News

  • ಕಾರ್ಮಿಕರಿಗೆ ಕೀಟ್ ವಿತರಿಸಿದ  ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್

    ಕಾರ್ಮಿಕರಿಗೆ ಕೀಟ್ ವಿತರಿಸಿದ ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್

    ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ ಅವರು ಸರ್ಕಾರದ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಕಿಟ್ ಗಳನ್ನು ಕಾರ್ಮಿಕರಿಗೆ ವಿತರಿಸಿದರು. ಗುರುವಾರ ಸಂಜೆ ಬೆಳಗಾವಿಯ ಉತ್ತರ ಶಾಸಕ ಆಸೀಫ್ ಸೇಠ್ ಅವರು ಸರ್ಕಾರದ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ಕಿಟ್ ಗಳನ್ನು ಇಲೆಕ್ಟ್ರಿಷಿಯನ್ಸ್, ಪ್ಲಂಬರ್ಸ್ ಮತ್ತು ಮೇಸ್ತ್ರಿ ಸೇರಿದಂತೆ ಇನ್ನುಳಿದ ಕಾರ್ಮಿಕರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಕಿಟಗಳನ್ನು ಪಡೆದ ಕಾರ್ಮಿಕರು ಶಾಸಕ ಆಸೀಫ್ ಸೇಠ್ ಅವರಿಗೆ ಧನ್ಯವಾದಗಳನ್ನು ತಿಳಿಸಿದರು. ಬಡ ಕಾರ್ಮಿಕರು ವೃತ್ತಿಗೆ ಬೇಕಾದ ಕಿಟಗಳನ್ನು ಖರೀದಿಸಲು ಆಗುವುದಿಲ್ಲ. ಅವರ ಅನುಕೂಲ ಮತ್ತು ಸುರಕ್ಷತೆಗಾಗಿ ಸರ್ಕಾರ ಕಾರ್ಮಿಕ…

    Read More »
  • ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 19,969 ಪಡಿತರ ಕಾರ್ಡ್ ರದ್ದು…!

    ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 19,969 ಪಡಿತರ ಕಾರ್ಡ್ ರದ್ದು…!

    ಬೆಳಗಾವಿ : ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು 11,117 ಹಾಗೂ ಆದ್ಯತೇತರ ಪಡಿತರ ಚೀಟಿಗಳು 1,421 ಹೀಗೆ ಒಟ್ಟು 12,538 ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ರದ್ದುಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಂತ್ಯೋದಯ 447, ಆದ್ಯತಾ ಪಡಿತರ ಚೀಟಿಗಳು 19412 ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್ – 2023 ) ರಿಂದ (ಏಪ್ರೀಲ್-2024 ) ವರೆಗೆ ಪಡಿತರವನ್ನು ಇಲಾಖೆಯ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯದೇ ಇದ್ದುದರಿಂದ ಆ ಕಾರ್ಡ್…

    Read More »
  • ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆ

    ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆ

    ಖಾನಾಪುರ: ತಾಲ್ಲೂಕಿನ ಕಣಕುಂಬಿ, ಲೋಂಡಾ, ನಾಗರಗಾಳಿ, ಗುಂಜಿ ಮತ್ತು ಭೀಮಗಡ ಅರಣ್ಯಪ್ರದೇಶದಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಪಟ್ಟಣ ಸೇರಿದಂತೆ ತಾಲ್ಲೂಕಿನ ಉಳಿದೆಡೆ ಸಾಧಾರಣ ಮಳೆಯಾಗಿದೆ. ಕಂದಾಯ ಇಲಾಖೆಯಂತೆ ಕಣಕುಂಬಿ ಅರಣ್ಯದಲ್ಲಿ 11.5 ಸೆಂ.ಮೀ, ಲೋಂಡಾ-9 ಸೆಂ.ಮೀ, ಜಾಂಬೋಟಿ ಸುತ್ತಮುತ್ತ 6.2 ಸೆಂ.ಮೀ ಮತ್ತು ಉಳಿದೆಡೆ ಸರಾಸರಿ 5 ಸೆಂ.ಮೀ ಮಳೆ ಸುರಿದಿದೆ.   ಪಟ್ಟಣದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿತ್ತು. ತಾಲ್ಲೂಕಿನ ನಂದಗಡ, ಹಲಸಿ ಭಾಗದಲ್ಲಿ ಸಂಜೆ ತುಂತುರು ಮಳೆಯಾಗಿದೆ. ಎರಡು ದಿನಗಳಿಂದ ಮಳೆಯ ಅಬ್ಬರ ಕ್ಷೀಣಿಸಿದ್ದು, ಮಲಪ್ರಭಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ.…

    Read More »
  • ಬೆಳಗಾವಿ- ಮಿರಜ್ ವಿಶೇಷ ಪ್ಯಾಸೆಂಜರ್ ರೈಲು ಸಂಚಾರ

    ಬೆಳಗಾವಿ- ಮಿರಜ್ ವಿಶೇಷ ಪ್ಯಾಸೆಂಜರ್ ರೈಲು ಸಂಚಾರ

    ಬೆಳಗಾವಿ :ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಗಳಿಗೆ ತೀವ್ರ ಹಾನಿಯಾಗಿದ್ದು ಬೆಳಗಾವಿ ಮತ್ತು ಮಹಾರಾಷ್ಟ್ರದ ಮೀರಜ್ ನಡುವೆ ದೈನಂದಿನ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬೆಳಗಾವಿ – ಮೀರಜ್ ನಡುವೆ ವಿಶೇಷ ಪ್ಯಾಸೆಂಜ‌ರ್ ರೈಲು ಓಡಿಸಲಾಗುತ್ತಿದೆ. ಬೆಳಗಾವಿ – ಮೀರಜ್ ರೈಲು : ಪ್ರತಿದಿನ ಬೆಳಿಗ್ಗೆ 6.10ಕ್ಕೆ ಹೊರಟು 9.10ಕ್ಕೆ ಮೀರಜ್ ತಲುಪಲಿದೆ. ಮರಳಿ ಬೆಳಿಗ್ಗೆ 9.50ಕ್ಕೆ ಮೀರಜ್‌ನಿಂದ ಹೊರಟು ಮಧ್ಯಾಹ್ನ 12.50ಕ್ಕೆ ಬೆಳಗಾವಿ ತಲುಪುತ್ತದೆ.ಬೆಳಗಾವಿ-ಮೀರಜ್ ರೈಲು : ಮಧ್ಯಾಹ್ನ 1.30ರಿಂದ ಬೆಳಗಾವಿಯಿಂದ ಹೊರಟು ಸಂಜೆ 04.30ಕ್ಕೆ ಮೀರಜ್ ತಲುಪಲಿದೆ. ಮರಳಿ ಸಂಜೆ 05.358…

    Read More »
  • ಗೋಕಾಕ‌ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ; ಊಟೋಪಹಾರ ವ್ಯವಸ್ಥೆ ಪರಿಶೀಲನೆ- ಸಂತ್ರಸ್ತರೊಂದಿಗೆ ಸಮಾಲೋಚನೆ

    ಗೋಕಾಕ‌ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ; ಊಟೋಪಹಾರ ವ್ಯವಸ್ಥೆ ಪರಿಶೀಲನೆ- ಸಂತ್ರಸ್ತರೊಂದಿಗೆ ಸಮಾಲೋಚನೆ

    ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ಅತಿವೃಷ್ಟಿಯಿಂದ ಸಂತ್ರಸ್ತ ಕುಟುಂಬಗಳಿಗಾಗಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಭಾನುವಾರ ಭೇಟಿ ನೀಡಿ, ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಸಂತ್ರಸ್ತ ಕುಟುಂಬಗಳಿಗೆ ತಕ್ಷಣವೇ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಿ ಊಟೋಪಹಾರ ಸೇರಿದಂತೆ ಎಲ್ಲ ರೀತಿಯ ಅಗತ್ಯ ನೆರವು ಒದಗಿಸಲಾಗುತ್ತಿದೆ. ಸಂತ್ರಸ್ತರಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಸಮರ್ಪಕ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಹಶೀಲ್ದಾರ ಹಾಗೂ ನೋಡಲ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ಜಿಲ್ಲಾಧಿಕಾರಿ ರೋಷನ್ ಸೂಚನೆ ನೀಡಿದರು. ಗೋಕಾಕ‌ ಕಾಳಜಿ ಕೇಂದ್ರಕ್ಕೆ ಡಿಸಿ…

    Read More »
  • ಬೆಳಗಾವಿಯಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ,

    ಬೆಳಗಾವಿಯಲ್ಲಿ ಪ್ರವಾಹ: ಹಲವು ಗ್ರಾಮಗಳು ಜಲಾವೃತ,

    ಬೆಳಗಾವಿ, ಜುಲೈ 28: ಜಿಲ್ಲೆಯಲ್ಲಿ 7 ನದಿಗಳಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 40 ಗ್ರಾಮಗಳಲ್ಲಿ ನದಿಗಳ ಪ್ರವಾಹದಿಂದ ಜನರು ಅತಂತ್ರವಾಗಿದ್ದಾರೆ. ಘಟಪ್ರಭಾ ನದಿ (Ghataprabha River) ಸೃಷ್ಟಿಸಿರುವ ಅವಾಂತರಕ್ಕೆ ಈಗ ಜನ ತತ್ತರಿಸಿ ಹೋಗಿದ್ದಾರೆ. ತನ್ನ ಪಾತ್ರವನ್ನ ಬಿಟ್ಟು ಹರಿಯುತ್ತಿರುವ ನದಿ ಊರಿಗೆ ಊರನ್ನೇ ತನ್ನ ಒಡಲಿಗೆ ಹಾಕಿಕೊಂಡಿದೆ. ಸೇತುವೆ, ದೇವಸ್ಥಾನ, ಬ್ಯಾಂಕ್ ಮತ್ತು ಮನೆಗಳು ಹೀಗೆ ಎಲ್ಲವೂ ಜಲಾವೃತವಾಗಿವೆ. ಪ್ರವಾಹದಿಂದ ಬಿದಿಗೆ ಬಿದ್ದ 1 ಸಾವಿರಕ್ಕೂ ಹೆಚ್ಚು ಕುಟುಂಬಗಳು ಗೋಕಾಕ್, ನಿಪ್ಪಾಣಿ, ಅಥಣಿ, ಮೂಡಲಗಿ, ಹುಕ್ಕೇರಿ, ಕಾಗವಾಡ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರವಾಹದ ಎಫೆಕ್ಟ್ ಉಂಟಾಗಿದೆ.…

    Read More »
  • ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ

    ಶಾಲಾ ಬಸ್ ಪಲ್ಟಿಯಾಗಿ ಹಲವು ವಿದ್ಯಾರ್ಥಿಗಳಿಗೆ ಗಾಯ

    ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ ಹೊಡೆದ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದ ಹೊರವಲಯದಲ್ಲಿಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್ 40ಕ್ಕೂ ಅಧಿಕ ಶಾಲಾ ವಿದ್ಯಾರ್ಥಿಗಳನ್ನು ಸಾಗಿಸುತ್ತಿತ್ತು. ಆದರೆ ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಐವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಮರಡಿಮಠ ಗ್ರಾಮದ ಜೈ ಹನುಮಾನ್ ಸಂಜೀವ ನಾಯಕ‌ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಶಾಲಾ ಬಸ್ ಇದಾಗಿದೆ. ಮಾವನೂರ ಮೇಲ್ಮನಹಟ್ಟಿ, ಗೋಡಚಿನಮಲ್ಕಿ ಗ್ರಾಮದ…

    Read More »
  • ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

    ಕೃಷಿ ಕಾಯ್ದೆ ಹಿಂಪಡೆಯಲು ರೈತ ಸಂಘಟನೆಗಳ ಆಗ್ರಹ

    ಬೆಳಗಾವಿ: ತಮಗೆ ಮಾರಕವಾದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.   ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಿಲ್‌ ಪಾವತಿಸಬೇಕು. ಬರದಿಂದ ತತ್ತರಿಸಿದ ರೈತರಿಗೆ ತ್ವರಿತವಾಗಿ…

    Read More »
  • ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್‌ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

    ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಬೈಕ್‌ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು

    ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಂಕಲಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    Read More »
  • SDPI ವತಿಯಿಂದ ಬೃಹತ್ ಪ್ರತಿಭಟನೆ ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು

    SDPI ವತಿಯಿಂದ ಬೃಹತ್ ಪ್ರತಿಭಟನೆ ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು

    ಬೆಳಗಾವಿ: ಮಹಾರಾಷ್ಟ್ರದ ವಿಶಾಲಗಡ ಬಳಿಯ ಗಾಜಾಪೂರದಲ್ಲಿ ಅನ್ಯಕೊಮಿನವರು ಮಸಿದಿ ಮೇಲೆ ಮಾಡಿರುವ ಹಲ್ಲೆಯನ್ನು ಖಂಡಿಸಿ ಬೆಳಗಾವಿಯಲ್ಲಿ ಎಸ್ ಡಿಪಿಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇಂದು ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನೆಯು ಕೋರ್ಟ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ನೂರಾರು ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರು ಡಿಸಿ ಕಚೇರಿ ಎದುರು ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದರು.‌ ದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ಅನ್ಯಾಯ ಹೆಚ್ಚುತ್ತಿವೆ. ದೇಶದಲ್ಲಿ ಶಾಂತಿ ಇಲ್ಲದಂತಾಗಿದೆ. ಈ ಅನ್ಯಾಯದ ವಿರುದ್ದು ಎಸ್…

    Read More »
Back to top button